ಶಾಲಾ-ಕಾಲೇಜು ಶುಲ್ಕ ಹೆಚ್ಚಿಸದಂತೆ ಶಿಕ್ಷಣ ಸಚಿವರ ಮನವಿ

ಬೆಂಗಳೂರು: ಮಾನವೀಯತೆ ಆಧಾರದ ಮೇಲೆ ಶಾಲಾ, ಕಾಲೇಜುಗಳು ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡದಂತೆ ಸುತ್ತೋಲೆ ನೀಡಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಹೇಳಿದ್ದಾರೆ.

ಕೊರೊನಾದಿಂದಾಗಿ ಮಧ್ಯಮ ಹಾಗೂ ಬಡವರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಶುಲ್ಕವನ್ನು ಮಾನವೀಯತೆ ಆಧಾರದ ಮೇಲೆ ಹೆಚ್ಚಳ ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ. ಈ ಸಂಬಂಧ ಸಹಾಯವಾಣಿಯನ್ನೂ ಆರಂಭಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಬಾಕಿ ಇರುವ ಶುಲ್ಕವನ್ನು ಪಾವತಿ ಮಾಡುವಂತೆ ಶಾಲಾ, ಕಾಲೇಜುಗಳು ಒತ್ತಡ ಹೇರಬಾರದು. ಯಾರು ಶಕ್ತರಿರುತ್ತಾರೋ ಅವರಾಗೇ ಶುಲ್ಕ ಪಾವತಿ ಮಾಡಲು ಬಂದರೆ  ಶುಲ್ಕ ಪಾವತಿ ಮಾಡಿಕೊಳ್ಳಿ ಎಂದು ಹೇಳಿದ್ದೇವೆ. ಶಕ್ತರಲ್ಲದವರಿಗೆ ಸದ್ಯಕ್ಕೆ ಶುಲ್ಕ ಪಾವತಿ ಮಾಡುವಂತೆ ಒತ್ತಡ ಹೇರಬಾರದು ಎಂದಿದ್ದಾರೆ.

About ಬಿ.ಎನ್‌. ವಾಸರೆ 704 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*