ಬೃಂದಾವನ ಫಾರಂ ಹೌಸ್‌ನಲ್ಲಿ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ

ಬೆಂಗಳೂರು: ರವಿವಾರ ಅಕಾಲಿಕವಾಗಿ ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ ಅಂತಿಮ ಕ್ರಿಯೆ ಧ್ರುವ ಸರ್ಜಾ ಅವರಿಗೆ ಸೇರಿದ ಬೆಂಗಳೂರಿನ ನೆಲಗುಳಿ ಗ್ರಾಮದ ‘ಬೃಂದಾವನ’ ಫಾರಂ ಹೌಸ್ ನಲ್ಲಿ ಸೋಮವಾರ ನೆರವೇರಿತು.

ಬಸವನಗುಡಿಯ ನಿವಾಸದಿಂದ ಹೊರಟ ಅವರ ಪಾರ್ಥಿವ ಶರೀರ ನೆಲಗುಳಿಯಲ್ಲಿರುವ ಫಾರಂ ಹೌಸ್ ತಲುಪಿತು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನ ಅವರಿಗೆ ಅಂತಿಮ ವಿದಾಯ ಹೇಳಿದರು.

ಬಳಿಕ ಫಾರಂ ಹೌಸ್ ನಲ್ಲಿ ಗೌಡರ ಸಂಪ್ರದಾಯದಂತೆ ವೈದಿಕ ವಿಧಿ ವಿಧಾನಗಳನ್ನು ಅವರ ತಂದೆ ನೆರವೇರಿಸಿದರು. ಈ ವೇಳೆ ಪತ್ನಿ ಮೇಘನಾ ದುಃಖ ತಡೆಯಲಾಗದೇ ಅಳುತ್ತಾ ಪತಿಯ ಮೃತದೇಹವನ್ನು ತಬ್ಬಿಕೊಂಡು ಅತ್ತ ದೃಶ್ಯ ಮನಕಲಕುವಂತಿತ್ತು. ಬಳಿಕ ಸಂಪ್ರದಾಯ ಪ್ರಕಾರ ಚಿರು ದೇಹವನ್ನು ಮಣ್ಣಲ್ಲಿಡಲಾಯಿತು. ಅಲ್ಲಿಗೆ ಚಿರು ಸರ್ಜಾ ಎಂಬ ಯುವ ನಟನ ಸಿನಿ ಬದುಕು ಅತ್ಯಂತ ಚಿಕ್ಕವಯಸ್ಸಿನಲ್ಲಿಯೇ ಅಂತ್ಯವಾಗಿ ಹೋದಂತಾಯಿತು.

About ಬಿ.ಎನ್‌. ವಾಸರೆ 710 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*